ಊಟಕ್ಕೆ ಗತಿಯಿಲ್ಲದವರು ಸೇನೆಗೆ ಸೇರ್ತಾರಂತೆ..!?

ತಮ್ಮ ಮಗನಿಗೆ ಲೋಕಸಭಾ ಚುನಾವಣಾ ಟಿಕೆಟ್ ಕೊಡಿಸುವಲ್ಲಿ ತೋರಿಸಿದ ಉತ್ಸಾಹವನ್ನು ದೇಶ ಕಾಯಲು ಆತನನ್ನು ಸೈನ್ಯಕ್ಕೆ ಕಳುಹಿಸುವಲ್ಲಿ ಯಾಕೆ ತೋರಿಸಲಿಲ್ಲ, ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಮೂಲಕ ಕುಮಾರ ಸ್ವಾಮಿ ಟಾಂಗ್ ಕೊಟ್ಟದೆ.

‘ಸೈನ್ಯಕ್ಕೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು ಶ್ರೀಮಂತರ ಮನೆ ಮಕ್ಕಳಲ್ಲ, ಬದಲಾಗಿ ಎರಡು ಹೊತ್ತಿನ ಊಟಕ್ಕೆ ಗತಿಯಿಲ್ಲ, ಕೆಲಸವಿಲ್ಲ ಎನ್ನುವವರು ಸೈನ್ಯಕ್ಕೆ ಹೋಗಿ ಸೇರುತ್ತಾರೆ’ ಎಂದು ಸಿಎಂ ಕುಮಾರಸ್ವಾಮಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೇಳಿದ್ದರು

ಈ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಕರ್ನಾಟಕ ಬಿಜೆಪಿ, “ಮಾನ್ಯ ಕುಮಾರಣ್ಣ ಅವರೇ ಊಟಕ್ಕೆ ಗತಿಯಿಲ್ಲದ ಯುವಕರು ಸೈನ್ಯಕ್ಕೆ ಎಂದು ಹೇಳಿರುವ ನಿಮಗೆ ನಾಚಿಕೆಯಾಗಬೇಕು. ಯುವಕರು ದೇಶಭಕ್ತಿಯಿಂದ ಸೈನ್ಯಕ್ಕೆ ಸೇರುತ್ತಾರೆಯೇ ಹೊರತು ಯಾವುದೇ ಆಸೆ. ಅಮಿಷಗಳಿಂದಲ್ಲ. ಸೈನಿಕರ ಬಗ್ಗೆ ಕೀಳಾಗಿ ಮಾತನಾಡಿದ ನಿಮ್ಮನ್ನು ನಾಡಿನ ಜನತೆ ಕ್ಷಮಿಸಲಾರರು” ಎಂದು ಬಿಜೆಪಿ ಕರ್ನಾಟಕ ಟ್ವಿಟರ್ ಮೂಲಕ ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಮಾನ್ಯ ಕುಮಾರಣ್ಣ ಅವರೆ ಊಟಕ್ಕೆ ಗತಿಯಿಲ್ಲದ ಯುವಕರು ಸೈನ್ಯಕ್ಕೆ ಸೇರುತ್ತಾರೆ ಎಂದು ಹೇಳಿದರು ನಿಮಗೆ ನಾಚಿಕೆಯಾಗಬೇಕು. ಯುವಕರು ದೇಶಭಕ್ತಿಯಿಂದ ಸೈನ್ಯಕ್ಕೆ ಸೇರುತ್ತಾರೆಯೇ ಹೊರತು ಯಾವುದೇ ಆಸೆ ಅಮಿಷುಗಳಿಂದಲ್ಲ. ಸೈನಿಕರ ಬಗ್ಗೆ ಕೀಳಾಗಿ ಮಾತನಾಡಿದ ನಿಮ್ಮನ್ನು ನಾಡಿನ ಜನತೆ ಕ್ಷಮಿಸಲಾರರು” ಎಂದು ಬಿಜೆಪಿ ಕರ್ನಾಟಕ ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *